ಹುಬ್ಬಳ್ಳಿ: ಬಿಜೆಪಿಯವರು ಸುಮ್ಮನೆ ಹೇಳಿ ಹೇಳಿ ಕಾಂಗ್ರೆಸ್ ನಿಂದ ವೀರಶೈವರನ್ನು ದೂರು ಮಾಡುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಶಾಸಕ ಬಿ ಸಿ ಪಾಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.ನಗರದಲ್ಲಿಂದು ವೀರಶೈವರು ಕಾಂಗ್ರೆಸ್ ಮತ ಹಾಕಲ್ಲ ಎಂದು ಬಿಎಸ್ ವೈ ಹೇಳಿಕೆಗೆ ತಿರುಗೇಟು ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ 16 ವೀರಶೈವ, ಲಿಂಗಾಯತ ಶಾಸಕರು ಆಯ್ಕೆಯಾಗಿದ್ದೇವೆ. ನಾವು ಅಪ್ಪಟ ಬಸವಣ್ಣನ ಅನುಯಾಯಿಗಳು ಎಂದರು.ಲೋಕಸಭೆ ಚುನಾವಣೆ ಬಳಿಕ ಸಂಪುಟ ವಿಸ್ತರಣೆ.ನನಗೆ ಅವಕಾಶ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಮಾಜಿ ಸಚಿವ ರಮೇಶ ಜಾರಕಿಹೊಳಿ ಅತೃಪ್ತರ ಸಂಪರ್ಕ ವಿಚಾರವಾಗಿ ಮಾತನಾಡಿದರು.ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗೆ ಸಂಪುಟದಲ್ಲಿ ಅವಕಾಶ ಸಿಕ್ಕಿರಲಿಲ್ಲ.ಹಾಗಾಗೀ ಅತೃಪ್ತಿ ಹೊಂದಿದ್ದೆ, ಆದರೇ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ಸಚಿವರನ್ನಾಗಿಸುವ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





