Breaking News

ಬಿಜೆಪಿಯವರು ಕಾಂಗ್ರೆಸನಿಂದ ವೀರಶೈವರನ್ನು ದೂರ ಮಾಡಲು ಷಡ್ಯಂತ್ರ ರೂಪಿಸುತ್ತಿದ್ದಾರೆ: ಬಿ.ಸಿ.ಪಾಟೀಲ

ಹುಬ್ಬಳ್ಳಿ: ಬಿಜೆಪಿಯವರು ಸುಮ್ಮನೆ ಹೇಳಿ ಹೇಳಿ ಕಾಂಗ್ರೆಸ್ ನಿಂದ ವೀರಶೈವರನ್ನು ದೂರು ಮಾಡುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಶಾಸಕ ಬಿ ಸಿ ಪಾಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.ನಗರದಲ್ಲಿಂದು ವೀರಶೈವರು ಕಾಂಗ್ರೆಸ್ ಮತ ಹಾಕಲ್ಲ ಎಂದು ಬಿಎಸ್ ವೈ ಹೇಳಿಕೆಗೆ ತಿರುಗೇಟು ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ 16 ವೀರಶೈವ, ಲಿಂಗಾಯತ ಶಾಸಕರು ಆಯ್ಕೆಯಾಗಿದ್ದೇವೆ. ನಾವು ಅಪ್ಪಟ ಬಸವಣ್ಣನ ಅನುಯಾಯಿಗಳು ಎಂದರು.ಲೋಕಸಭೆ ಚುನಾವಣೆ ಬಳಿಕ ಸಂಪುಟ ವಿಸ್ತರಣೆ.ನನಗೆ ಅವಕಾಶ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಮಾಜಿ ಸಚಿವ ರಮೇಶ ಜಾರಕಿಹೊಳಿ ಅತೃಪ್ತರ ಸಂಪರ್ಕ ವಿಚಾರವಾಗಿ ಮಾತನಾಡಿದರು.ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗೆ ಸಂಪುಟದಲ್ಲಿ ಅವಕಾಶ ಸಿಕ್ಕಿರಲಿಲ್ಲ.ಹಾಗಾಗೀ ಅತೃಪ್ತಿ ಹೊಂದಿದ್ದೆ, ಆದರೇ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ಸಚಿವರನ್ನಾಗಿಸುವ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.

Share News

About admin

Check Also

ಹುಬ್ಬಳ್ಳಿಯಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ: ಬ್ಲ್ಯಾಕ್‌ಮೇಲ್ ಮಾಡಿ ಯುವತಿಗೆ ಅತ್ಯಾಚಾರ ಎಂಬ ಗಂಭೀರ ಆರೋಪ..

ಹುಬ್ಬಳ್ಳಿ: ನಗರದಲ್ಲಿ ಈಗಾಗಲೇ ಜಿಮ್ ಟ್ರೇನರ್ ಸಂಬಂಧಿತ ಪ್ರಕರಣ ಚರ್ಚೆಯಲ್ಲಿರುವ ನಡುವೆಯೇ, ಮತ್ತೊಂದು ಗಂಭೀರ ‘ಲವ್ ಜಿಹಾದ್’ ಆರೋಪದ ಪ್ರಕರಣ …

Leave a Reply

Your email address will not be published. Required fields are marked *