ಹುಬ್ಬಳ್ಳಿ: ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ವತಿಯಿಂದ ಇಂದು ಸರಕು ಸಾಗಣಿಕೆ ವಾಹನಗಳಲ್ಲಿ ಸಾರ್ವಜನಿಕರನ್ನು ಕೊಂಡೊಯ್ಯುವ ಹಾಗೂ ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆ ಮಾಡಲು ವಾಹನ ನೀಡುವುದನ್ನು ಖಂಡಿಸಿ ವಿವಿಧ ಶಾಲಾ ಕಾಲೇಜಿನ ಸಹಯೋಗದೊಂದಿಗೆ ಜನಜಾಗೃತಿ ರ್ಯಾಲಿಯನ್ನು ನಗರದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಜನಜಾಗೃತಿ ಮಂಡಿಸಲಾಯಿತು.ಸರಕು ಸಾಗಾಟಕ್ಕೆ ಬಳಸುವ ವಾಹನಗಳಲ್ಲಿ ಸಾರ್ವಜನಿಕರ ಪ್ರಯಾಣ ನಿಷೇಧಿಸಿದ್ದರೂ ಕೂಡ ಸರಕು ಸಾಗಾಣಿಕೆಯ ವಾಹನಗಳಲ್ಲಿ ಸಾರ್ವಜನಿಕರನ್ನು ಸಾಗಿಸುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಅಲ್ಲದೇ ಸಾರ್ವಜನಿಕ ಈ ಬಗ್ಗೆ ಕಾಳಜಿ ವಹಿಸಬೇಕೆಂದು ಜಾಗೃತಿ ಮೂಡಿಸಲಾಯಿತು.ಹು-ಧಾ ಮಹಾನಗರ ವ್ಯಾಪ್ತಿಯಲ್ಲಿ ಹಾಗೂ ಧಾರವಾಡ ಜಿಲ್ಲೆಯಾಧ್ಯಂತ ಇಂತಹ ಘಟನೆಗಳು ಜರುಗದಂತೆ ಕಟ್ಟೆಚರ ವಹಿಸಲಾಗಿದ್ದು, ಸಾರಿಗೆ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಬೇಕೆಂದು ಹಾಗೂ ಅಮೂಲ್ಯವಾದ ಜೀವನವನ್ನು ಕಾಪಾಡಿಕೊಳ್ಳಲು ಎಲ್ಲರೂ ಸಾರಿಗೆ ಸಂಚಾರಿ ನಿಯಮ ಪಾಲನೆಗೆ ಬದ್ದರಾಗಬೇಕೆಂದು ಘೋಷಣೆ ಕೂಗಿ ಶಾಲಾ ಮಕ್ಕಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು…
bigtvnews | Hubli Dharwad News | Kannada News | Karnataka News Hubli News | News In Hubli | Local news





