ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ಪಟ್ಟಣದಲ್ಲಿ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ತಾಲ್ಲೂಕು ಘಟಕದ ವತಿಯಿಂದ ಜಾಮಿಯ ಮಸೀದಿಯ ಆವರಣದಲ್ಲಿ ಬಡ ಮುಸ್ಲಿಂ ಕುಟುಂಬಗಳಿಗೆ ಈದ್ ಕಿಟ್ ಗಳನ್ನು ವಿತರಿಸಲಾಯಿತು. ಪುರಸಭೆ ಸದಸ್ಯೆ ಖಮ್ಮರ್ ಬೇಗಂ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು…ಪುರಸಭೆಯ ಮಾಜಿಅಧ್ಯಕ್ಷ ಕೆ.ಗೌಸ್ ಖಾನ್, ಪುರಸಭೆ ಮಾಜಿಸದಸ್ಯೆ ತಂಜೀಮಾಕೌಸರ್, ಮುಸ್ಲಿಂ ಸಮಾಜದ ಮುಖಂಡರಾದ ಹಾಫೀಜುಲ್ಲಾಶರೀಫ್, ನವೀದ್ ಅಹಮದ್, ಚಾಂದ್ ಪಾಶ, ಅಕ್ಬರ್ ಪಾಶ, ಶಬೀರ್ ಅಹಮದ್ ಸೇರಿದಂತೆ ನೂರಾರು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





