ವಾಣಿಜ್ಯ ನಗರೀ ಹುಬ್ಬಳ್ಳಿಯಲ್ಲಿ ರಂಜಾನ್ ಹಬ್ಬಕ್ಕೂ ಮೂರುಸಾವಿರ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಇಂದು ರಂಜಾನ್ ಹಬ್ಬದ ಪ್ರಾರ್ಥನೆ ನಂತರ ಮುಸ್ಲಿಂ ಬಾಂಧವರು ಮೂರು ಸಾವಿರ ಮಠಕ್ಕೆ ಭೇಟಿ ನೀಡಿ ಮೂರು ಸಾವಿರ ಮಠದ ಶ್ರೀ ಗುರುಸಿದ್ದರಾಜಯೋಗೀಂದ್ರ ಶ್ರೀಗಳಿಂದ ಆಶೀರ್ವಾದ ಪಡೆಯುತ್ತಿದ್ದರು. ಕಳೆದ ಹಲವು ದಶಕಗಳಿಂದಲೂ ಈ ಸಂಪ್ರದಾಯ ಬೆಳೆದುಕೊಂಡು ಬಂದಿದೆ. ಈ ವರ್ಷವೂ ಕೂಡ ಶ್ರೀ ರಾಜಯೋಗೀಂದ್ರ ಶ್ರೀಗಳು ಮುಸ್ಲಿಂ ಬಾಂಧವರಿಗೆ ಶುಭಕೋರಿದರು. ಎಂದೆಂದಿಗೂ ಹಿಂದು ಮುಸ್ಲಿಂರಲ್ಲಿ ಸಾಮರಸ್ಯ ನೆಲೆಸಲಿ. ಎಲ್ಲರೂ ಸಹೋದರಂತೆ ಬಾಳಿ ಎಂದು ಆಶಿರ್ವದಿಸಿದರು. ಮುಸ್ಲಿಂ ಸಮುದಾಯದ ಮೌಲ್ವಿಗಳು, ಮುಸ್ಲಿಂ ಮುಖಂಡ ಎ ಎಂ ಹಿಂಡಸಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





