Breaking News

ಟ್ರಾಕ್ಟರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಟ್ರಾಕ್ಟರ್ ಹರಿದು
ಬೈಕ್ ಸವಾರ ಸ್ಥಳದಲ್ಲೇ ಸಾವನ್ನಾಪ್ಪಿದ
ಘಟನೆ ಬೆಳಗಾವಿ ಜಿಲ್ಲೆಯ
ಸವದತ್ತಿ ತಾಲೂಕಿನ ಕಡಬಿ ಬಳಿಯ ಮಾಡಮಗೇರಿ ಯರಗಣವಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ರಾಮದುರ್ಗ
ತಾಲೂಕಿನ ಚುಂಚನೂರ ಗ್ರಾಮದ ಮಹಾದೇವ ಬೆಳ್ಳಿವರಿ ಸ್ಥಳದಲ್ಲೇ ಸಾವನ್ನಾಪ್ಪಿದ್ದು, ಮೊಮ್ಮಗಳನ್ನು ವಸತಿ ಶಾಲೆಗೆ ಬಿಡಲು
ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಮೊಮ್ಮಗಳು ಪ್ರಾಣಾಪಾಯದಿಂದ ಪಾರಾಗಿದ್ದು ಕೈಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅಪಘಾತ ಸಂಬವಿಸಿದ ಕೂಡಲ್ಲೆ ಟ್ರಾಕ್ಟರ್ ಚಾಲಕ ಪರಾರಿಯಾಗಿದ್ದು, ಯರಗಟ್ಟಿ ಪೊಲೀಸರು
ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಪೋಲಿಸರು ಆರೋಪಿಗಾಗಿ ಬಲೆ ಬೀಸಿದ್ದು, ಈ ಕುರಿತು ಯರಗಟ್ಟಿ
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *