ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಜಾಗಿನಕೆರೆ ಬಳಿ ಕ್ತಾಟರ್ ಬಿಲ್ಲನ್ನು ಬಳಸಿ ರಾಷ್ಟ್ರೀಯ ಪಕ್ಷಿಯಾದ ನವಿಲಿನ ಭೇಟೆಯಾಡುತ್ತಿದ್ದ ನಾಗಮಂಗಲ ತಾಲ್ಲೂಕಿನ ಶಿಕಾರಿಪುರದ ನಾಲ್ವರು ಯುವಕರ ಪೈಕಿ ಇಬ್ಬರನ್ನು ಕೆ.ಆರ್.ಪೇಟೆ ವಲಯ ಅರಣ್ಯಾಧಿಕಾರಿ ಮಧುಸೂದನ್ ಮತ್ತು ಸಿಬ್ಬಂಧಿಗಳು ಮೃತ ನವಿಲು, ಟಿವಿಎಸ್ ಸ್ಕೂಟರ್ ಸಮೇತವಾಗಿ ಬಂಧಿಸಿದ್ದಾರೆ. ಶಿಕಾರಿಪುರದ ಎಲ್ಲೇಶ್(19) ಮತ್ತು ಪ್ರಭು(20) ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆಯ ಸಿಬ್ಬಂಧಿಗಳು ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





