ದಲಿತ ಯುವಕನ ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದನ್ನು ಖಂಡಿಸಿ ಇಂದು ಬೆಂಗಳೂರು
ಹೊರವಲಯದ ಆನೇಕಲ್ ಪಟ್ಟಣದಲ್ಲಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಾಪ್ ಎಂಬ ದಲಿತ ಯುವನನ್ನು ಬೆತ್ತಲೆಗೊಳಿಸಿ ಗುಂಡ್ಲುಪೇಟೆಯಲ್ಲಿ ಪೈಶಾಚಿಕ
ಕೃತ್ಯ ವೆಸಗಿದ್ದರು. ಇದರ ಹಿನ್ನೆಲೆಯಲ್ಲಿ ಆನೇಕಲ್ ಪಟ್ಟಣದ
ಅಂಬೇಡ್ಕರ್ ಪ್ರತಿಮೆ ಬಳಿ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮೂಲಕ
ಆರೋಪಿಗಳನ್ನು ಬಂದಿಸುವಂತೆ ಆಗ್ರಹಿಸಿದರು. ಚಾಮರಾಜನಗರ ಲೋಕಸಭಾ ಸದಸ್ಯ
ಶ್ರೀನಿವಾಸ್ ಪ್ರಸಾದ್ ಹಾಗೂ ದಲಿತ ಶಾಸಕರ ವಿರುದ್ದ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ
ವ್ಯಕ್ತಪಡಿಸಿದರು,
bigtvnews | Hubli Dharwad News | Kannada News | Karnataka News Hubli News | News In Hubli | Local news





