Breaking News

ಕಡಲಕೊರೆತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪರಿಶೀಲನೆ.

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಆಗುತ್ತಿದೆ . ಭಾರೀ ಮಳೆಯಿಂದಾಗಿ ಜಿಲ್ಲೆಯ ವಿವಿಧೆಡೆ ಮರಗಳು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ . ನಗರದ ಪಂಪ್ ವೆಲ್ ಬಳಿ ಹಲವು ಮನೆಗಳಿಗೆ ನೀರು ನುಗ್ಗಿದೆ . ಉಳ್ಳಾಲದಲ್ಲಿ ಕಡಲ್ಕೊರೆತ ಪ್ರದೇಶಲ್ಲಿ ಹುಚ್ಚು ಸಾಹಸ ಮಾಡಲು ಯತ್ನಿಸಿದ್ದ ಯುವಕನೋರ್ವ ಅಪಾಯದಿಂದ ಪಾರಾಗಿದ್ದಾನೆ . ಉಳ್ಳಾಲದ ಮೊಗವೀರಪಟ್ಟಣ ಕೈಕೋ ಹಿಲರಿ ನಗರ ಕೋಟೆಪುರ ಉಚ್ಚಿಲ ಮುಂತಾದ ಪ್ರದೇಶಗಲ್ಲಿ ಕಡಲ ಕೊರೆತ ತೀವ್ರ ಗೊಂಡಿದೆ . ಕಡಲಕೊರೆತ ಪ್ರದೇಶಗಳಿಗೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು .ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಚಂಡಮಾರುತದ ಪರಿಣಾಮವಾಗಿ ಆರಭಿ ಸಮುದ್ರದಲ್ಲಿ ಅಲೆಗಳ ಅಬ್ಬರ ಜಾಸ್ತಿ ಆಗಿದೆ .ಉಳ್ಳಾಲ್ ಪ್ರದೇಶದಲ್ಲಿ ಕಡಲ ಕೊರೆತ ತೀವ್ರಗೊಂಡಿದೆ .ಹಲವು ಮನೆಗಳಿಗೆ ಹಾನಿ ಆಗಿದೆ .ಅವರಿಗೆ ಪರಿಹಾರ ನೀಡಲಾಗುವುದು .ಅಲ್ಲದೆ ಈ ಭಾಗದಲ್ಲಿ ಹಲವು ಮನೆಗಳು ಅಪಾಯಕ್ಕೆ ಸಿಲುಕಿದ್ದು ಅಲ್ಲಿನ ಜನರಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ .ನಿರಾಶ್ರಿತರ ಪರಿಹಾರ ಕೇಂದ್ರ ತೆರೆಯಲಾಗಿದೆ .ಕಡಲ್ ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಾಗುವುದು.ಈಗಾಗಲೇ ಒಂದೆರಡು ಕಡೆಗಳಲ್ಲಿ ಶಾಶ್ವತ ಪರಿಹಾರ ಕಾಮಗಾರಿ ನಡೆಸಲಾಗಿದ್ದು ಅದು ಯಶಸ್ವಿ ಆಗಿದೆ ಎಂದು ಹೇಳಿದರು .ಬೈಟ್ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಆರಂಭಗೊಂಡಿತ್ತು .ಕಳೆದ ಒಂದು ತಿಂಗಳಿನಿಂದ ನೇತ್ರಾವತಿ ನದಿಯಲ್ಲಿ ನೀರು ಬತ್ತಿ ಹೋಗಿರುವುದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಯಾತ್ರಿಕರಿಗೆ ನೀರಿನ ಸಮಸ್ಯೆ ಉಂಟಾಗಿತ್ತು .ಈಗ ಮಳೆ ಬಂದ ಕಾರಣ ನೀರಿನ ಸಮಸ್ಯೆ ಬಗೆಹರಿದ್ದು ಭಕ್ತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ .ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಮಳೆಯಿಂದ ಹಾನಿಗೊಳಗಿರುವ ಪ್ರದೇಶಗಳಿಗೆ ಹಾಗೂ ಉಳ್ಳಾಲ್ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಸೂಕ್ತ ರಕ್ಷಣಾ ಕ್ರಮ ಕೈಗೊಳ್ಳುವಂತೆ ಪೊಲೀಸ್ ರಿಗೆ ಸೂಚನೆ ನೀಡಿದರು .

Share News

About admin

Check Also

ಕೆಲಸ ಮಾಡದೆ ಕೇಂದ್ರ ಸರ್ಕಾರದ ಬಗ್ಗೆ ಬೆರಳು ತೋರಿಸಿದ್ರು…

ಚಿತ್ರದುರ್ಗ, ನವೆಂಬರ್‌ 07: ಕೆಲಸ ಮಾಡದೇ ಕೇಂದ್ರ ಸರ್ಕಾರದ ಕಡೆ ಬೆರಳು ಮಾಡುವ ಕಾಂಗ್ರೆಸ್ ಸರ್ಕಾರದ ಕೆಲಸ ಬೇಜವಾಬ್ದಾರಿತನದ ಪರಮಾವಧಿ …

Leave a Reply

Your email address will not be published. Required fields are marked *

You cannot copy content of this page