ರಾಜ್ಯದ ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರಿದಿದೆ . ಉಳ್ಳಾಲದಲ್ಲಿ ಕಡಲ ಕೊರೆತ ಹಾವಳಿ ತೀವ್ರ ಗೊಂಡಿದೆ .ಹಲವು ಮನೆಗಳಿಗೆ ಹಾನಿ ಆಗಿದೆ .ಇನ್ನೂ ಕೆಲವು ಮನೆಗಳು ಅಪಾಯದ ಅಂಚಿನಲ್ಲಿವೆ .ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಉಳ್ಳಾಲ ದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಈ ವೇಳೆ ಮಾಧ್ಯಮ ದವರೊಂದಿಗೆ ಮಾತನಾಡಿದ ಯು ಟಿ ಖಾದರ್ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿ ಮಳೆಗಾಲದ ಆರಂಭದಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ .ಹಲವಾರು ಮನೆಗಳಿಗೆ ಹಾನಿ ಆಗಿದೆ .ಇನ್ನೂ ಕೆಲವು ಮನೆಗಳು ಅಪಾಯದಲ್ಲಿವೆ .ಮನೆ ಕಳೆದುಕೊಂಡವರಿಗೆ ಸರಕಾರದ ವತಿಯಿಂದ ಪರಿಹಾರ ನೀಡಲಾಗುವುದು .ಕಡಲ ಕೊರೆತ ಸಮಸ್ಯೆ ಗೆ ಶಾಶ್ವತ ಪರಿಹಾರ ಕ್ರಮ ಸರಕಾರ ಕೈಗೊಳ್ಳಲಿದೆ ಎಂದು ಹೇಳಿದರು . ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news





