ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಿಜೆಪಿಗೆ ಅಧಿಕಾರದ ಮದ ಏರಿದೆ, ಹಾಗಾಗಿ ಇಂತಹ ಅಸಭ್ಯ ಹೇಳಿಕೆಗಳನ್ನ ನೀಡುತ್ತಿದ್ದಾರೆಂದು ಗ್ರಾಮೀಣಾಭಿವೃದ್ದಿ ಸಚಿವ ಕೃಷ್ಣಬೈರೇಗೌಡ ಕೋಲಾರದಲ್ಲಿ ಹೇಳಿಕೆ ನೀಡಿದರು. ಕೈ ಕಡಿಯುವುದು, ತಲೆ ತೆಗೆಯುವುದು ಬಿಜೆಪಿ ಸಂಸ್ಕೃತಿಯನ್ನ ಬಿಂಬಿಸುತ್ತದೆ. ಮೇಲು ಕೀಳು ಎಂಬ ಭಾವನೆ ಅವರ ತಲೆಯಲ್ಲಿ ಹಾಗೆ ಉಳಿದಿದೆ. ಮನುಷ್ಯ ಜನ್ಮ ಸ್ವಾಭಾವಿಕವಾಗಿದ್ದು, ಹೀಗೆಲ್ಲ ಒಂದು ಸಮುದಾಯಕ್ಕೆ ನೋವಾಗುವ ರೀತಿ ಮಾತನಾಡಬಾರದು. ಸಂಸದೆ ಶೋಭಾ ಕರೆಂದ್ಲಾಜೆ ಅಸಭ್ಯ ಟ್ವಿಟ್ ಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಟಾಂಗ್ ನೀಡಿದರು. ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ನೀಡಿದ್ದು, ಎರಡು ಪಕ್ಷಗಳ ವರಿಷ್ಠರ ತೀರ್ಮಾನ. ಮುಂದಿನ ಸಂಪುಟ ಅಗತ್ಯ ಬಿದ್ದರೆ ವರಿಷ್ಠರ ತೀರ್ಮಾನದಂತೆ ಕಾಂಗ್ರೆಸ್ ಅತೃಪ್ತ, ಹಿರಿಯ ಶಾಸಕರಿಗೆ ಅವಕಾಶ ನೀಡುತ್ತಾರೆ. ಹಾಗೂ ಅವಶ್ಯಕತೆ ಬಿದ್ದರೆ ವರಿಷ್ಠರ ತೀರ್ಮಾನದಂತೆ ಕಾಂಗ್ರೆಸ್ ನ ಸಚಿವರು ತಮ್ಮ ಸ್ಥಾನ ತ್ಯಾಗ ಮಾಡಲು ಸಿದ್ದ ಎಂದರು.
Check Also
ಬೀದಿ ವ್ಯಾಪಾರಿಗಳಿಗೆ ಬಿಗ್ ಶಾಕ್: ಫುಟ್ಪಾತ್ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವು
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಬೆನ್ನಲೇ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ ನೀಡಿದೆ. ಜಯನಗರ ಬಿಡಿಎ ಶಾಪಿಂಗ್ ಕಾಂಪ್ಲೆಕ್ಸ್ …