ಅಲೋಕ್ಕುಮಾರ್ ಅವರು ಎಡಿಜಿಪಿ ಹುದ್ದೆಗೆ ಬಡ್ತಿ ಪಡೆಯುವ ಮೂಲಕ ಕಮಿಷನರ್ ಆಗಿ ನೇಮಕವಾಗಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿದ್ದ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಆಸಕ್ತಿ ವಹಿಸಿ ಅಲೋಕ್ಕುಮಾರ್ ಅವರನ್ನು ಅಪರಾಧ ವಿಭಾಗದ ಹೆಚ್ಚುವರಿ ಕಮಿಷನರ್ ಆಗಿ ನೇಮಕ ಮಾಡಿದ್ದರು. ಕಳೆದ ಡಿ. 31ರಂದೇ ಅಲೋಕ್ಕುಮಾರ್ ಸೇರಿ ಮೂವರು ಅಧಿಕಾರಿಗಳಿಗೆ ಬಡ್ತಿ ನೀಡಬೇಕಿತ್ತು. ಆದರೆ, ಖಾಲಿ ಹುದ್ದೆಗಳಿಲ್ಲದ ಕಾರಣ ಬಡ್ತಿಯನ್ನು ತಡೆ ಹಿಡಿಯಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news





