ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು. ನಗರದ ಜಯದೇವ ವೃತ್ತದ ಮುಖಾಂತರ ಎಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ,ಶಿಕ್ಷಣವೆಂಬುದು ಸರ್ವರಿಗೂ ಸಿಗಬೇಕಾಗಿರು ಅಮೂಲ್ಯ ಸಂಪತ್ತು ಎಂಬ ಶ್ರೇಷ್ಠ ಪರಿಕಲ್ಪನೆ ನಮ್ಮದು ,ಆದರೆ 2018-19 ನೇ ಸಾಲಿನ ಬಜೆಟ್ ನಲ್ಲಿ ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಸೇರಿದಂತೆ ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಇವತ್ತಿನವರೆಗೂ ಆ ಯೋಜನೆ ಜಾರಿಗೆ ಬಾರದಿರುವುದು ರಾಜ್ಯ ಸರ್ಕಾರದ ವಿದ್ಯಾರ್ಥಿಗಳ ಮೇಲಿನ ನಿರ್ಲಕ್ಷ್ಯವಾಗಿದೆ, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ದಾವಣಗೆರೆಯ ಉಪವಿಭಾಗಾಧಿಕಾರಿಗಳಗೆ ಮನವಿ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





