ಕಳೆದ ಐದು ವರ್ಷಗಳ ಹಿಂದೆ 80 ಬಡಗುಬೆಟ್ಟು ಗ್ರಾಪಂ ವ್ಯಾಪ್ತಿಯ ಮಣಿಪಾಲ- ಅಲೆವೂರು ರಸ್ತೆಯ ಮಂಚಿಕೆರೆ ಎಂಬಲ್ಲಿ ರುವ ನಾಗಬ್ರಹ್ಮಸ್ಥಾನದ ಎದುರಿನ ಎರಡನೆ ಅಡ್ಡರಸ್ತೆಯ ಭೂಮಿಯಲ್ಲಿ ಕಂಡು ಬಂದಿರುವ ಬಿರುಕು ಇದೀಗ ಇನ್ನಷ್ಟು ಹಿರಿದಾಗಿದ್ದು, ಇಲ್ಲಿನ ಮನೆ ಹಾಗೂ ಬಾವಿಗಳಿಗೆ ಹಾನಿ ಉಂಟು ಮಾಡಿರುವ ಈ ಬಿರುಕಿನಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. 2014ರ ಜುಲೈ ತಿಂಗಳಲ್ಲಿ ಈ ಪರಿಸರದಲ್ಲಿ ಭೂಮಿ ಬಿರುಕು ಬಿಟ್ಟಿರುವ ವಿಚಾರ ಸ್ಥಳೀಯ ಗಮನಕ್ಕೆ ಬಂದಿದ್ದು, ಆಗ ಸುಮಾರು ನೂರು ಮೀಟರ್ ಉದ್ದದವರೆಗೆ ಭೂಮಿ ಬಾಯ್ದೆರೆದಿರುವುದು ಕಂಡುಬಂದಿತ್ತು. ಅದೇ ಸಮಯ ದಲ್ಲಿ ಎರಡು ಮೂರು ತಿಂಗಳ ಹಿಂದೆ ಮಂಚಿಕೆರೆಯಿಂದ ಸುಮಾರು ಏಳು ಕಿ.ಮೀ. ದೂರದ ಪರ್ಕಳದಲ್ಲಿ ಕಡು ಬೇಸಿಗೆಯಲ್ಲಿ ನೀರುಕ್ಕಿ ಹರಿದು ತೊರೆ, ಬಾವಿಗಳು ತುಂಬಿದ್ದವು.
bigtvnews | Hubli Dharwad News | Kannada News | Karnataka News Hubli News | News In Hubli | Local news





