ಚಾಮರಾಜನಗರದ ನಗರಸಭೆ ನಿರ್ಲಕ್ಷ್ಯವನ್ನು ಖಂಡಿಸಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಮುಂದೆ ತಮಟೆ ಚಳುವಳಿ ನಡೆಸಿದ ಪ್ರತಿಭಟನಾಕಾರರು ನಗರಸಭೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಶ್ರೀನಿವಾಸಗೌಡ, ಪಟ್ಟಣದಲ್ಲಿ ಹಲವಾರು ದಿನಗಳಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿ ಜನಸಾಮಾನ್ಯರು ಹಾಗೂ ವಾಹನ ಸವಾರರು ಓಡಾಟ ನಡೆಸಲು ತೊಂದರೆಯಾಗುತ್ತಿದೆ. ಅಲ್ಲದೇ ಒಳಚರಂಡಿ ಕಾಮಗಾರಿ ಸರಿಯಾದ ರೀತಿಯಲ್ಲಿ ಆಗದೇ ಅಲ್ಲಲ್ಲಿ ಗುಂಡಿಗಳು ಬಾಯಿ ತೆರೆದು ಸಾರ್ವಜನಿಕರಿಗೆ ತುಂಬಾ ಅನಾನುಕೂಲವಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





