Breaking News

ರೈತನೋರ್ವ ಸಾಲಬಾಧೆ ತಾಳಲಾರದೆ ಆತ್ಮಹತ್ಯೆ

ರಾಯಚೂರು:. ಸಾಲಬಾಧೆ ತಾಳಲಾರದೆ ರೈತ ಸಾವಿಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನರಕಲದಿನ್ನಿ ಗ್ರಾಮದಲ್ಲಿ ನಡೆದಿದೆ.ಬಸವರಾಜ ಜಾವೂರ (35) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ನಾಗರಗಾಳ ಪಿಕೆಜಿಬಿ ಬ್ಯಾಂಕ್​ನಲ್ಲಿ ಸುಮಾರು 3 ಲಕ್ಷ ರೂ. ಸಾಲ ಮಾಡಿದ್ದ ಎಂದು ತಿಳಿದುಬಂದಿದೆ. ರೈತ ಸತತ ಬರಗಾಲದಿಂದ ತತ್ತರಿಸಿ ಹೋಗಿದ್ದು, ಸಾಲ ಮರುಪಾವತಿ ಮಾಡಲು‌ ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.ಈ ಸಂಬಂಧ ಲಿಂಗಸೂಗೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ಐವರ ಕೊಲೆ ಹಾಗೂ ಇಬ್ಬರ ಕೊಲೆ ಯತ್ನ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮರಣದಂಡನೆ ಹಾಗೂ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ.!!

ಮೃತ ಈರಪ್ಪನ ಮಗ ಮೌನೇಶ ಎನ್ನುವಾತ ಸಣ್ಣ ಪಕೀರಪ್ಪ ಕೊನದವರು ಎನ್ನುವ ಕೊಲೆ ಆರೋಪಿಯ ಮಗಳನ್ನು ಪ್ರೀತಿಸಿ ಮದುವೆಯಾಗಿದ್ದ. ಈ …

Leave a Reply

Your email address will not be published. Required fields are marked *