ಕೋಲಾರ: ಮನೆ ಬೀಗ ಮುರಿದು ಚಿನ್ನಾಭರಣ ಕಳವು ಮಾಡಿರುವ ಘಟನೆ ಕೋಲಾರದ ಕಾರಂಜಿಕಟ್ಟೆಯ 12ನೇ ಕ್ರಾಸ್ ನಲ್ಲಿ ನಡೆದಿದೆ. ಕೋಲಾರದ ಬೆಸ್ಕಾಂ ನೌಕರ ಪ್ರಭಾಕರ್ ಮನೆಯವರು ಊರಿಗೆ ಹೋಗಿದ್ದಾಗ ಬೀಗ ಹೊಡೆದು ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ. ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದು, ಸ್ಥಳಕ್ಕೆ ಕೋಲಾರ ನಗರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





