ಮಂಗಳೂರು: ಚಾಲೆಂಜಿಂಗ್
ಸ್ಟಾರ್ ದರ್ಶನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ
ಸಲ್ಲಿಸಿದ್ದಾರೆ. ದರ್ಶನ್ ಅವರು ಪುತ್ತೂರಿನ ಸ್ನೇಹಿತರೊಬ್ಬರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ
ದರ್ಶನ್ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ
ಸಲ್ಲಿಸಿದರು. ನಂತರ ಮಹಾಗಣಪತಿ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ
ಪೂಜೆ ಸಲ್ಲಿಸಿದ್ದಾರೆ. ಸೌತಡ್ಕ ಹಾಗೂ ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ಕೊಟ್ಟ ಬಳಿಕ ದರ್ಶನ್
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿ ಸುಬ್ರಹ್ಮಣ್ಯನ ಅನುಗ್ರಹ ಪಡೆದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆಗೆ ಅವರ
ಆಪ್ತ ವರ್ಗವೂ ಭಾಗಿಯಾಗಿತ್ತು. ಇದೇ ವೇಳೆ ಅಭಿಮಾನಿಗಳು ನಟ ದರ್ಶನ್ ಅವರನ್ನು ನೋಡಿ
ಸಂತಸಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





