ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸತತವಾಗಿ ಜಿಟಿ ಜಿಟಿ ಮಳೆ ಸುರಿಯುತಿದ್ದು, ಒಂದು ಕಡೆ ಮಳೆ ಇಲ್ಲದೇ ಕಂಗಾಲಾಗಿದ್ದ ರೈತರು ಸಂತಸಪಟ್ಟರೆ, ಇನ್ನೊಂದು ಕಡೆ ಮಳೆಯಿಂದ ಮನೆಗಳು ನೆಲಸಮವಾಗಿರುವದರಿಂದ ಜನರು ಆತಂಕ ಪಡುವ ವಾತಾವರಣ ನಿರ್ಮಾಣವಾಗಿದೆ.ಶನಿವಾರದಿಂದ ಪ್ರಾರಂಭವಾಗಿರುವ ಜಿಟಿ ಜಿಟಿ ಮಳೆಯಿಂದ ಜನ ಪರದಾಡುವಂತಾಗಿದ್ದು, ಜನರು ಮನೆಯಿಂದ ಹೊರಬೀಳಲು ಹಿಂದೇಟು ಹಾಕುತ್ತಿದ್ದಾರೆ. ಶನಿವಾರ ರಾತ್ರಿ ಸುರಿದ ಜಿಟಿ ಜಿಟಿ ಮಳೆಯಿಂದಾಗಿ ನಗರದ ಬಂಕಾಪುರ ಚೌಕದ ನಿವಾಸಿ ಮಲ್ಲಿಕಾರ್ಜುನ ಮೋಟಗಿ ಎಂಬುವರ ಮನೆಯ ತಡೆ ಗೋಡೆ ಕುಸಿದು ಬಿದ್ದಿದ್ದು, ಇದರ ಜೊತೆಗೆ ನಗರದ ಹಲವೆಡೆ ಮನೆಗಳು ನೆಲಕ್ಕುರುಳಿವೆ. ಒಟ್ಟಿನಲ್ಲಿ ಜಿಟಿ ಜಿಟಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





