ಚಿಕ್ಕೋಡಿ: ಬಿಜೆಪಿ ರಾಷ್ಟ್ರೀಯ ನಾಯಕರು ಆಪರೇಷನ್ ಕಮಲ ನಡೆಯುವದಿಲ್ಲ ಎಂದು ಹೇಳಿದ್ದಾರೆ. ಆ ಪ್ರಕಾರವೇ ರಾಜ್ಯ ಬಿಜೆಪಿ ನಾಯಕರು ನಡೆದುಕೊಳ್ಳಲಿದ್ದೇವೆ ಎಂದುಬಿಜೆಪಿ ಶಾಸಕ ಉಮೇಶ ಕತ್ತಿ ಹೇಳಿದರು.ಹುಕ್ಕೇರಿ ತಾಲೂಕಿನ ಸುಲ್ತಾನಪೂರ ಗ್ರಾಮದಲ್ಲಿ ಸೇತುವೆ ಉದ್ಘಾಟಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯುವದಿಲ್ಲ.ಆದರೆ ಮೈತ್ರಿ ಸರಕಾರ ಬಿದ್ದು ಹೋದರೆ ರಾಜ್ಯದಲ್ಲಿ ಹೊಸ ಸರ್ಕಾರವನ್ನು ನಾವು ರಚನೆ ಮಾಡೇ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ರಾಜ್ಯದ ಸಿಎಂ ರಾಜೀನಾಮೆ ಕೊಟ್ಟು ಹೋಗಬೇಕಿತ್ತು. ಆದರೆ ನಾಚಿಕೆ ಬುದ್ದಿ ಇಲ್ಲದೆ ಸಿಎಂ ಸರಕಾರ ನಡೆಸಿದರೆ ನಾವೇನು ಮಾಡಬೇಕು ಎಂದು ಕಿಡಿ ಕಾರಿದರು.ಮುಂದೆ ಚುನಾವಣೆ ಬಂದರೆ ಬರತಕ್ಕಂಥ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವದು ನಿಶ್ಚಿತ ಎಂದರು .ಯಡಿಯೂರಪ್ಪನವರು ಯಾವಾಗ ಸಿಎಂ ಆಗೋರು ಎಂಬ ಮಾಧ್ಯಮದ ಪ್ರಶ್ನೆಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಕತ್ತಿ 25 ವರ್ಷದ ಬಳಿಕ ಸಿಎಂ ಆಗಲಿದ್ದಾರೆ ಎಂದು ವ್ಯಂಗ್ಯವಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





