Breaking News

ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ.

ಆನೇಕಲ್: ನಗ್ನ ಸ್ಥಿತಿಯಲ್ಲಿ ವ್ಯಕ್ತಿಯ ಕೊಳೆತ ಶವವು
ಬೆಂಗಳೂರು ಹೊರವಲಯ ಆನೇಕಲ್ನ ನಾರಾಯಣಪುರದ ಮನೆಯೊಂದರಲ್ಲಿ ಪತ್ತೆಯಾಗಿದೆ.
ಚೌಡಪ್ಪ (45) ಮೃತ ದುರ್ದೈವಿ.
ಮೃತ ಚೌಡಪ್ಪ ನಾರಾಯಣ ಪುರದ ಮನೆಯಲ್ಲಿ ಒಬ್ಬನೇ ಇರುತ್ತಿದ್ದ.‌ ಒಂದು ವರ್ಷದ ಹಿಂದೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಾಗಿನಿಂದ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದ. ಹಾಗೂ ಇದ್ದ ಒಬ್ಬ ಮಗನು ಸಹ ಬೇರೊಂದು ಮನೆಯಲ್ಲಿ ವಾಸಿಸುತ್ತಿದ್ದ.‌
ವ್ಯಕ್ತಿ‌ ಒಮ್ಮಿಂದೊಮ್ಮೆಲೆ ಶವವಾಗಿ ಪತ್ತೆಯಾಗಿರುವದು ಅನುಮಾನಕ್ಕೆ ಎಡೆ ಮಾಡಿದೆ.
ಕಳೆದ ಎರಡು ದಿನಗಳಿಂದ ಸುತ್ತಮುತ್ತಲಿನ ಮನೆಯವರಿಗೆ ಕೊಳೆತ ವಾಸನೆ ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.‌
ಕುಡಿದ ಅಮಲಿನಲ್ಲಿ ದುಷ್ಕರ್ಮಿಗಳು ವ್ಯಕ್ತಿಯ ಮನೆಯಲ್ಲಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಆನೇಕಲ್ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌
ಮೃತ ದೇಹವನ್ನು ಆನೇಕಲ್ ಪೋಲಿಸರು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *