ಹುಬ್ಬಳ್ಳಿ: ಸಿದ್ಧಾರೂಢ ಮಠಕ್ಕೆ ಕರೆದುಕೊಂಡು ಹೋಗುವುದಾಗಿ ಸವದತ್ತಿ ಮೂಲದ ವ್ಯಕ್ತಿಯನ್ನು ನಂಬಿಸಿ ಆಟೋದಲ್ಲಿ ಗದಗ ರಸ್ತೆಯ ಹೊರ ವಲಯಕ್ಕೆ ಕರೆದುಕೊಂಡು ಹೋಗಿ ಹಲ್ಲೆಮಾಡಿ, ಹಣ, ಮೊಬೈಲ್ ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸವದತ್ತಿ ಮೂಲದ ಮೌಳೇಶ ದಿನ್ನಿಮನಿ ಹಣ ಕಳೆದುಕೊಂಡವರು. ಆಟೋ ಚಾಲಕ ರಮೇಶ ಪಾಂಚಾನ, ಲಕ್ಷ್ಮೀ, ಶಶಿಕಲಾ ಹಾಗೂ ರಾಜು ಬಂಧಿತರು.ಇಬ್ಬರು ಪುರುಷರು ಹಾಗೂ ಮಹಿಳೆಯರು ಸೇರಿ ಪ್ರಯಾಣಿಕರ ಸೋಗಿನಲ್ಲಿ ಸುಲಿಗೆ ಮಾಡಿದ್ದರು.ಕೂಡಲೇ ಜಾಗೃತರಾದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





