Breaking News

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ನಗರಸಭಾ ಆಯುಕ್ತ ಪುಟ್ಟಸ್ವಾಮಿ

ರಾಮನಗರ: ಖಾತೆ ಮಾಡಿಕೊಡುವದಾಗಿ ಹೇಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ನಗರಸಭಾ ಆಯುಕ್ತ ಹಾಗೂ ಕೇಸ್ ವರ್ಕರ್ ಎಸಿಬಿ ಅಧಿಕಾರಿಗಳ ತೆಕ್ಕೆಗೆ ಬಿದ್ದಿದ್ದಾರೆ.‌ನಗರಸಭಾ ಆಯುಕ್ತ ಪುಟ್ಟಸ್ವಾಮಿ ಹಾಗೂ ಕೇಸ್ ವರ್ಕರ್ ಮೋಹನ್ ಎಸಿಬಿ ಬಲೆಗೆ ಬಿದ್ದಿರುವ ಆರೋಪಿಗಳು.‌ನಗರಸಭಾ ಆಯುಕ್ತ ಪುಟ್ಟಸ್ವಾಮಿ ಸಿದ್ದಿಖ್ ಎಂಬುವವರ ಬಳಿ ಖಾತೆಗಾಗಿ 20 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ.‌ ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ನಗರಸಭೆ ಮೇಲೆ ಏಕಾಏಕಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿಸಿದ್ದಿಖ್ ಅವರಿಂದ 15ಸಾವಿರ ರೂ. ಪಡೆಯುವಾಗ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *