ಚಿತ್ರದುರ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಬಡ ವಿದ್ಯಾರ್ಥಿಗಳಿಗೆ ಸರಕಾರಿ ಬಸ್ ನಲ್ಲಿ ಉಚಿತ ಪಾಸ್ ನೀಡುವಂತೆ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನಾ ಮೆರವಣಿಗೆ ಮಾಡಿದರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತು ಮತ್ತು ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಯನ್ನು ಕೈಗೊಂಡು ಸರಕಾರದ ಗಮನ ಸೆಳೆದರು.ನಗರದ ಪ್ರಮುಖ ಬೀದಿಗಳಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿಗೆ ಮನವಿ ನೀಡುವ ಮೂಲಕ ಕೊನೆಗೊಂಡಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





