ಮೊಳಕಾಲ್ಮುರು: ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರನ್ನು ವರ್ಗಾವಣೆ ಮಾಡಬೇಕು ಹಾಗೂ ಬದಲಿನ ಶಿಕ್ಷಕರ ನೇಮಕ ನಡೆಸಬೇಕೆಂದು ಆಗ್ರಹಿಸಿ
ಮೊಣಕಾಲ್ಮೂರು ತಾಲ್ಲೂಕಿನ ಗಡಿ ಭಾಗವಾದ ಹುಚ್ಛಂಗಿ ದುರ್ಗದ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಗಿಲು ಹಾಕಿ ಊರಿನ ಗ್ರಾಮಸ್ಥರು ಪ್ರತಿಭಟನೆ ಮಾಡಿದರು.
ಶಾಲೆಗೆ ಸಂಪೂರ್ಣ ಶಿಕ್ಷಕರು ಬರುವರೆಗೂ ಹಾಗೂ ಮುಖ್ಯ ಶಿಕ್ಷಕರನ್ನು ವರ್ಗಾವಣೆ ಮಾಡುವರೆಗೂ ಶಾಲೆಯ ಬಾಗಿಲು ತೆಗೆಯುವದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು. ಹಾಗೂ 5 ರಿಂದ 8 ತರಗತಿ ಮಕ್ಕಳಿಗೆ ಓದಲು ಬರೆಯಲು ಬರುವುದಿಲ್ಲ .
ಇವರು ಯಾವ ರೀತಿಯಲ್ಲಿ ತರಗತಿ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಅಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಅಧಿಕಾರಿಗಳು ಬರುವವರೆಗೂ ಮುಷ್ಕರ ಕೈಬಿಡುವದಿಲ್ಲ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





