ಮಂಡ್ಯ: ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಯುವಜನ ಕೌಶಲ್ಯ ಮತ್ತು ಯುವಸ್ಪಂದನ ಜಾಗೃತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಮಂಡ್ಯ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಮಾಜಿಅಧ್ಯಕ್ಷ ಹಾಗೂ ಚಿಂತಕರಾದ ಡಾ.ಕೆ.ಕಾಳೇಗೌಡ ಮಾತನಾಡಿ ಯುವಜನರು ತಮ್ಮಲ್ಲಿನ ಕೀಳರಿಮೆಯನ್ನು ಅಳಿಸಿಹಾಕಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದರು.ಇಂದಿನ ಜಾಗತಿಕ ಜಗತ್ತಿನ ಸ್ಪರ್ಧಾ ಪ್ರಪಂಚದಲ್ಲಿ ಸವಾಲುಗಳನ್ನು ಎದುರಿಸಿ ಮುನ್ನಡೆಯಬೇಕು. ಪರೋಪಕಾರ ಹಾಗೂ ಸೇವಾ ಮನೋಭಾವನೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಮುಖಿಯಾಗಿ ಹೆಜ್ಜೆಹಾಕಿ ಭವಿಷ್ಯದ ನಾಯಕರಾಗಿ ಹೊರಹೊಮ್ಮಬೇಕು ಎಂದು ಕಾಳೇಗೌಡ ಕರೆ ನೀಡಿದರು. ಪ್ರಾಂಶುಪಾಲ ಲಿಂಗಣ್ಣಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಕೃಷ್ಣಮೂರ್ತಿ, ಸದಸ್ಯ ಕೆ.ಎಸ್.ರಾಜೇಶ್, ಎನ್.ಎಸ್.ಎಸ್ ಅಧಿಕಾರಿ ಚಂದ್ರಶೇಖರ್ ಮತ್ತಿತರರು ಭಾಗವಹಿಸಿದ್ದರು.
Check Also
ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ, ವ್ಯಕ್ತಿಗೆ ಗಾಯ..!
ಹುಬ್ಬಳ್ಳಿ: ಖಾಸಗಿ ಟ್ರಾವೆಲ್ಸ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ವ್ಯಕ್ತಿಯೋರ್ವನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹುಬ್ಬಳ್ಳಿ …