ಚಿಕ್ಕೋಡಿ: ಕಳೆದ ಎರಡು ಮೂರು ದಿನಗಳಿಂದ ಕೃಷ್ಣಾ ನದಿಯ ನೀರಿನ ಒಳ ಹರಿವಿನಲ್ಲಿ ಹೆಚ್ಚಳವಾಗಿದ್ದು, ಕೃಷ್ಣಾ ನದಿ ನೀರಿನ ಸೆಳೆತಕ್ಕೆ ಸಿಲುಕಿ ಎರಡು ಎತ್ತುಗಳು ಮೃತಪಟ್ಟ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದೇಶ್ವರ ಗ್ರಾಮದಲ್ಲಿ ನಡೆದಿದೆ. ಗುಂಡು ಲಾಲಸಿಂಗೆ ಎಂಬುವರಿಗೆ ಸೇರಿದ ಎತ್ತುಗಳು ಇವಾಗಿದ್ದು ನದಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ಸ್ಥಳಕ್ಕೆ ಅಥಣಿ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





