Breaking News

ನದಿ ನೀರಿಗೆ ಸಿಲುಕಿ ಎರಡು ಎತ್ತು ಸಾವು

ಚಿಕ್ಕೋಡಿ: ಕಳೆದ ಎರಡು ಮೂರು ದಿನಗಳಿಂದ ಕೃಷ್ಣಾ ನದಿಯ ನೀರಿನ ಒಳ ಹರಿವಿನಲ್ಲಿ ಹೆಚ್ಚಳವಾಗಿದ್ದು, ಕೃಷ್ಣಾ ನದಿ ನೀರಿನ ಸೆಳೆತಕ್ಕೆ ಸಿಲುಕಿ ಎರಡು ಎತ್ತುಗಳು ಮೃತಪಟ್ಟ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದೇಶ್ವರ ಗ್ರಾಮದಲ್ಲಿ ನಡೆದಿದೆ. ಗುಂಡು ಲಾಲಸಿಂಗೆ ಎಂಬುವರಿಗೆ ಸೇರಿದ ಎತ್ತುಗಳು ಇವಾಗಿದ್ದು ನದಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ಸ್ಥಳಕ್ಕೆ ಅಥಣಿ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *