ಮೈತ್ರಿ ಸರ್ಕಾರಕ್ಕೆ ಬಿಎಸ್ಪಿಯಿಂದಲೂ ಬೆಂಬಲ ವಾಪಸ್ ಸಾಧ್ಯತೆ..!ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಿಲ್ಲೊಂದು ರೀತಿಯ ಸವಾಲುಗಳನ್ನು ಎದುರಿಸುತ್ತಲೇ ಬಂದಿದೆ. ಶಾಸಕರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವುದೇ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮೈತ್ರಿ ಪಕ್ಷಗಳ ನಾಯಕರಿಗೆ ತಲೆ ನೋವಾಗಿ ಪರಿಣಮಿಸಿದೆ. ಪಕ್ಷದಲ್ಲಿ ಎಷ್ಟೋ ಘಟಾನುಘಟಿ ಹಾಗೂ ಅನುಭವಿ ನಾಯಕರುಗಳಿದ್ದರೂ ಶಾಸಕರನ್ನು ಪಕ್ಷದಲ್ಲಿಯೇ ಮುಂದುವರೆಸಿಕೊಂಡು ಹೋಗುವಲ್ಲಿ ಮುಖಂಡರು ಎಡವಿದ್ದಾರೆ. ಇತ್ತೀಚೆಗಷ್ಟೇ ವಿಜಯನಗರ ಶಾಸಕರಾದ ಆನಂದ ಸಿಂಗ್ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅಧಿಕೃತವಾಗಿ ರಾಜೀನಾಮೆ ಘೋಷಣೆ ಮಾಡಿದ್ದರು. ಈಗ ಮೈತ್ರಿ ಸರ್ಕಾರಕ್ಕೆ ದೋಸ್ತಿಗಳ ಸುಮಾರು 14 ಶಾಸಕರು ರಾಜೀನಾಮೆ ನೀಡುತ್ತಿರುವುದು ಅಧಿಕೃತವಾಗಿದೆ. ಈ ರಾಜೀನಾಮೆ ಪರ್ವ ಕೊನೆಗೊಳ್ಳುವ ಮೊದಲೇ ಮತ್ತೊಂದು ಶಾಕ್ ಎದುರಾಗಿದೆ. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದ ಬಿಎಸ್ಪಿ ಶಾಸಕ ಮಹೇಶ್, ಬೆಂಬಲ ವಾಪಸ್ ಪಡೆಯುವ ಸಾಧ್ಯತೆಯಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಇಂದೇ ಸರ್ಕಾರವನ್ನು ಕೆಡವುದಕ್ಕೆ ಮೂಹೂರ್ತ ಫಿಕ್ಸ್ ಆಗಿದೆಯಾ? ಇದರಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ? ಅನ್ನೋ ಮಾಹಿತಿ ಲಭ್ಯವಾಗಿದೆ..!
bigtvnews | Hubli Dharwad News | Kannada News | Karnataka News Hubli News | News In Hubli | Local news





