ದಾವಣಗೆರೆ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನಕ್ಕೆ ದಿನಗಣನೆ ಆರಂಭಗೊಂಡಿರುವ ಹಿನ್ನಲೆಯಲ್ಲಿದಾವಣಗೆರೆಯಲ್ಲಿ ಜೆಡಿಎಸ್ ಮುಖಂಡ ಅಮಾನುಲ್ಲ ಖಾನ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಉರುಳು ಸೇವೆ ಮಾಡುವ ಮೂಲಕ ಸರ್ಕಾರವನ್ನು ಉಳಿಸುವಂತೆ ದಾವಣಗೆರೆ ನಗರ ದೇವತೆ ದುರ್ಗಾಂಭ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.ಸರ್ಕಾರ ಸುಭದ್ರವಾಗಿರಲಿ, ಕುಮಾರಸ್ವಾಮಿಯೆ ಸಿಎಂ ಆಗಿ ಮುಂದುವರಿಯಲು ಎಂದು ಪ್ರಾರ್ಥನೆ ಸಲ್ಲಿಸಿದರು. ಸಮ್ಮಿಶ್ರ ಸರ್ಕಾರಕ್ಕೆ ಬಂದ ಸಂಕಷ್ಟ ದೂರಾಗಲಿ, ವಿರೋಧಿಗಳ ಕುತಂತ್ರ ಫಲಿಸದಂತೆ ಕಾರ್ಯಕರ್ತರು ದೇವಿಗೆ ಬೇಡಿಕೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news





