ಚಾಮರಾಜನಗರ: ಜಿಲ್ಲೆಯಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತದ ಬಳಿ ಕತ್ತು ಕೊಯ್ದು ಗೃಹಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಭರಚುಕ್ಕಿ ಜಲಪಾತ ಬಳಿಯ ಮಯೂರ ಪ್ರವಾಸಿ ಮಂದಿರದ ಕಾವೇರಿ ನದಿ ದಂಡೆ ಮೇಲೆ ಗೃಹಿಣಿಯ ಕೊಲೆ ಮಾಡಲಾಗಿದೆ. ಬಂಡೆ ಮೇಲೆ ಕತ್ತು ಸೀಳಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದರು. ಶವದ ಪಕ್ಕದಲ್ಲಿ ಪುರುಷನ ಪ್ಯಾಂಟ್, ಗೃಹಿಣಿಯ ಚಪ್ಪಲಿ, ಜ್ಯೂಸ್ ಬಾಟಲಿ, ಬಟ್ಟೆಸೋಪು ಮತ್ತು ಬ್ರಶ್ ಪತ್ತೆಯಾಗಿದೆ. ಕೊಲೆಗೀಡಾದ ಗೃಹಿಣಿಯ ವಿಳಾಸ ತಿಳಿದು ಬಂದಿಲ್ಲ ಹಾಗಾಗಿ ಘಟನೆ ಕುರಿತು ಪೊಲೀಸರಿಂದ ತಿವ್ರ ತನಿಖೆ ನಡೆಸಲಾಗುತ್ತಿದೆ…
bigtvnews | Hubli Dharwad News | Kannada News | Karnataka News Hubli News | News In Hubli | Local news





