Breaking News

ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಸೊಸೆ ಪಿಎಸ್ ಐ ಮಗನಿಗೆ 7 ವರ್ಷ ಜೈಲು

ದಾವಣಗೆರೆ: ಮಹಿಳೆಗೆ ಏನಾದರೂ ತೊಂದರೆ ಆದರೆ ಮಹಿಳಾ ಪಡೆ ರಕ್ಷಣೆಗೆ ನಿಲ್ಲುತ್ತದೆ. ಆದರೆ, ಇಲ್ಲೋರ್ವ ಮಹಿಳಾ ಠಾಣೆ ಪಿಎಸ್​ಐ ತನ್ನ ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿ, ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದಾಳೆ. ಪ್ರಕರಣ ಸಾಬೀತಾದ ಹಿನ್ನೆಲೆ ಪಿಎಸ್​ಐ ಹಾಗೂ ಇವರ ಪುತ್ರ ಜೈಲು ಪಾಲಾಗಿದ್ದಾರೆ.ಘಟನೆ ಹಿನ್ನೆಲೆ: ಹುಬ್ಬಳ್ಳಿ ಮಹಿಳಾ ಪೊಲೀಸ್ ಠಾಣೆಯ ಪಿಎಸ್​ಐ ಲೀಲಾವತಿ ಎಂಬುವರ ಮಗನಾದ ನವೀನ್ ಕುಮಾರ್, ದಾವಣಗೆರೆ ನಗರದ ಸರಸ್ವತಿ ಬಡಾವಣೆಯ ನಿವಾಸಿ ನಿವೃತ್ತ ಎಂಜಿನಿಯರ್ ಬಸಪ್ಪ ಎಂಬುವರ ಮಗಳಾದ ಶರ್ಮಿಳಾ ಜೊತೆ 2014ರಲ್ಲಿ ವಿವಾಹ ಮಾಡಿಕೊಂಡಿದ್ದರು. ಮಹಿಳಾ ಪಿಎಸ್​ಐ, ಮಗ ಈಗ ಕಂಬಿ ಹಿಂದೆಮದುವೆ ಸಮಯದಲ್ಲಿ 10 ಲಕ್ಷ ರೂ. ಹಣ, 40 ತೊಲೆ ಬಂಗಾರ, 2 ಕೆಜಿ ಬೆಳ್ಳಿಯನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು ಎನ್ನಲಾಗಿದೆ. ಇಷ್ಟಕ್ಕೆ ಸುಮ್ಮನಾಗದ ಪಿಎಸ್​ಐ ಲೀಲಾವತಿ ಹಾಗೂ ಇವರ ಮಗ, ಶರ್ಮಿಳಾಗೆ ಹೆಚ್ಚಿನ ವರದಕ್ಷಿಣೆ‌ ತರುವಂತೆ ಒತ್ತಾಯಿಸಿ 03-09-2015ರಂದು ಆಕೆಯನ್ನು ಮನೆಯಿಂದ ಹೊರಗೆ ಹಾಕಿ ಬಳಿಕ ವಕೀಲರಿಂದ ನೋಟಿಸ್ ಕಳುಹಿಸಿ ಮಾನಸಿಕ ಹಿಂಸೆ ನೀಡಿದ್ದರು ಎನ್ನಲಾಗಿದೆ.‌ ಇದರಿಂದ ಬೇಸತ್ತ ಶರ್ಮಿಳಾ, 07-09-2015ರಂದು ತಮ್ಮ ತಂದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಬಗ್ಗೆ ತಂದೆ ಬಸಪ್ಪ ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಡಿವೈಎಸ್ಪಿ ಅಶೋಕ್ ಕುಮಾರ್ ತನಿಖೆ‌ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.4 ವರ್ಷಗಳ ನಂತ್ರ ಜೈಲು‌ಪಾಲಾದ ಆರೋಪಿಗಳು:ನ್ಯಾಯಾಧೀಶರಾದ ಅಂಬಾದಾಸ್ ಕುಲಕರ್ಣಿ ಅವರು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಆರೋಪಿಗಳಾದ ಲೀಲಾವತಿ(56), ನವೀನ್ ಕುಮಾರ್(32)ಗೆ ತಲಾ 7 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 18 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *