ಹುಬ್ಬಳ್ಳಿ: ಅಕ್ರಮವಾಗಿ ಅಪಾರ ಪ್ರಮಾಣದ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕ ಹಾಗೂ ಅಪಾರ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿಹುಬ್ಬಳ್ಳಿಯ ಅಶೋಕ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬೀದರ ಮೂಲದ ಸಿದ್ದರಾಮ ವಿಶ್ವನಾಥ ಗುಂಡೆ (29) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 10 ಲಕ್ಷ ಮೌಲ್ಯದ 52.6 ಕೆ ಜಿ ಗಾಂಜಾ ಒಂದು ಕಾರ್, ಮೊಬೈಲ್ ಜಪ್ತಿ ಮಾಡಲಾಗಿದೆ.ಬೀದರ್ ನ ಬಾಲ್ಕಿಯಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ವಶಪಡಿಸಿಕೊಳ್ಳಲಾಗಿದೆ. ಬಾಲ್ಕಿಯಿಂದ ಕಾರವಾರ ಹಾಗೂ ಗೋವಾಕ್ಕೆವಸಾಗಾಟ ಮಾಡುತ್ತಿರುವದಾಗಿ ಒಪ್ಪಿಕೊಂಡಿದ್ದು, ಉತ್ತರ ಉಪವಿಭಾಗ ಎಸಿಪಿ ಹಚ್.ಕೆ.ಪಠಾಣ್ ನೇತೃತ್ವದಲ್ಲಿ ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಜಗದೀಶ್ ಹಂಚಿನಾಳ ಕಾರ್ಯಾಚರಣೆ ನಡೆಸಲಾಗಿದ್ದು, ಪೊಲೀಸ್ ಆಯುಕ್ತ ಎಂ ಎನ್ ನಾಗರಾಜ್ ಪೊಲೀಸ್ ಸಿಬ್ಬಂದಿಗೆ ಬಹುಮಾನ ಘೋಷಣೆ ಮಾಡಿದ್ದಾರೆ.
Check Also
ಪ್ರಧಾನಿ ನರೇಂದ್ರ ಮೋದಿಗೆ ಎಲ್ಲಿ ನಿಮ್ಮ ಉದ್ಯೊಗ ಎಂದ ರಣದೀಪ್ ಸಿಂಗ್ ಸುರ್ಜೆವಾಲ….
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರೇ ನೀವು ಯುವಜನತೆಗೆ ನೀಡಿದ್ದ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿ? ಎಂದು ಕರ್ನಾಟಕ …