ಚಿಕ್ಕೋಡಿ: ಮೈತ್ರಿ ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯದಲ್ಲಿ ಸರ್ಕಾರ ಅತಂತ್ರಗೊಳ್ಳಲು ಕಾರಣರಾದ ಶಾಸಕರಲ್ಲಿ ಒಬ್ಬರಾದ ಕಾಂಗ್ರೆಸ್ ಪಕ್ಷದಬೆಳಗಾವಿ ಜಿಲ್ಲೆಯ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಮನೆಗೆ ಭದ್ರತೆಯನ್ನು ಒದಗಿಸಲಾಗಿದೆ.ರಾಜೀನಾಮೆಯಿಂದ ಆಕ್ರೋಶಗೊಂಡಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಶಾಸಕರು ರಾಜೀನಾಮೆ ಹಿಂಪಡೆಯುವಂತೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಲಿದ್ದಾರೆ. ಈಹಿನ್ನೆಲೆಯಲ್ಲಿ ಬಿಗಿ ಪೋಲಿಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆ ಎಸ್ ಆರ್ ಪಿ, ಒಂದು ಡಿ ಆರ್ ವ್ಯಾನ್ಸೇರಿದಂತೆ ನೂರಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





