ಕೋಲಾರ: ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ನೇತೃತ್ವದಲ್ಲಿಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಕಾಲೇಜು ವೃತ್ತದಲ್ಲಿ ಮೋದಿ, ಅಮಿತ್ ಷಾ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆ ಮಾಡಲಾಯಿತು.ಆಪರೇಷನ್ ಕಮಲ ಮೂಲಕ ಶಾಸಕರ ಖರೀದಿಗೆ ಇಳಿದಿರುವ ಯಡಿಯೂರಪ್ಪ ವಿರುದ್ಧವೂ ಪ್ರತಿಭಟನಾನಿರತರು ಕಿಡಿ ಕಾರಿದರು.ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿಯೂ ಆಕ್ರೋಶ ಹೊರಹಾಕಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





