Breaking News

ಹೂವಿನ ರಾಮಣ್ಣ ಹೃದಯಾಘಾತದಿಂದ ನಿಧನ

ಮಂಡ್ಯ: ಪಟ್ಟಣದ ಕೃಷ್ಣರಾಜಪೇಟೆ ತಾಲ್ಲೂಕಿನ ಶಾತ್ತದ ವೈಷ್ಣವ ಮಹಾಸಭಾದ ಮುಖಂಡರು, ಪಟ್ಟಣದ ಜನಪ್ರಿಯ ಹೂವಿನ ವ್ಯಾಪಾರಿಗಳಾದ ಊಚನಹಳ್ಳಿ ರಾಮಣ್ಣ(74) ಅವರು ಹೃದಯಾಘಾತದಿಂದ ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ನಿಧನರಾದರು.ಇಂದು ಬೆಳಿಗ್ಗೆ 10 ಗಂಟೆಗೆ ಮೃತ ರಾಮಣ್ಣನವರ ಶವ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ… ಮೃತರು ಪತ್ನಿ ಜಯಮ್ಮ ಪುತ್ರರಾದ ಯೋಗೇಶ್, ಶ್ರೀನಿವಾಸ್ ಮತ್ತು ಪುತ್ರಿ ಪದ್ಮಾ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಸಮಾಜಸೇವಕರು, ಪುರಸಭೆ ಕುವೆಂಪು ವಾಣಿಜ್ಯ ಮಳಿಗೆಗಳ ವರ್ತಕರ ಸಂಘದ ಅಧ್ಯಕ್ಷರೂ ಆಗಿರುವ ರಾಮಣ್ಣ ಅವರ ಅಕಾಲಿಕ ನಿಧನಕ್ಕೆ ಶಾಸಕ ಡಾ.ನಾರಾಯಣಗೌಡ, ಮಾಜಿಸ್ಪೀಕರ್ ಕೃಷ್ಣ, ಮಾಜಿಶಾಸಕ ಕೆ.ಬಿ.ಚಂದ್ರಶೇಖರ್, ಜಿ.ಪಂ ಸದಸ್ಯ ಹೆಚ್.ಟಿ.ಮಂಜು, ಮಾಜಿ ಜಿಪಂ ಉಪಾಧ್ಯಕ್ಷ ಎಸ್.ಅಂಬರೀಶ್, ಯುವಮುಖಂಡ ಶ್ರೀಧರ್ ಸಿರಿವಂತ್ ಸೇರಿದಂತೆ ಅಪಾರ ಬಂಧುಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

Share News

About admin

Check Also

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ – ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ಲಕ್ಷಾಂತರ ನಷ್ಟ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ …

Leave a Reply

Your email address will not be published. Required fields are marked *