Breaking News

5 ಲಕ್ಷ ಮೌಲ್ಯದ ಅಕ್ರಮ ಮರಳು ವಶ

ರಾಯಚೂರು: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡ ಮೇಲೆ ದಾಳಿ ನಡೆಸಿ ಪೋಲಿಸರು ೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಎಸ್ಪಿ ಡಾ.ಸಿ.ಬಿ ವೇದಮೂರ್ತಿ ನೇತೃತ್ವದಲ್ಲಿ ದಾಳಿ ನಡೆಸಿದ ಪೋಲಿಸರು ಮಾನಶಯ್ಯ , ಶಿವು ನಿಲವಂಜಿ, ಭೀಮಪ್ಪ ಎಂಬುವವರನ್ನು ಬಂಧಿಸಿದ್ದಾರೆ. ‌
ದೇವದುರ್ಗ ತಾಲೂಕಿನ ಹೇರುಂಡಿ, ನಿಲವಂಜಿ ಗ್ರಾಮಗಳಲ್ಲಿ ಪಟ್ಟಾ ಜಮೀನಿನಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಿಟ್ಟಿದ್ದರು.
ಒಟ್ಟು ಸುಮಾರು ೫ ಲಕ್ಷ ೧೦ ಸಾವಿರ ಬೆಲೆ ಬಾಳುವ ೧೦೦೦ ಮೆಟ್ಟಿಕ್ ಟನ್ ಮರಳು ವಶಕ್ಕೆ ಪಡೆಯಲಾಗಿದೆ.
ಈ ಕುರಿತು ದೇವದುರ್ಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *