ಆನೇಕಲ್ : ಲಾರಿ ಚಕ್ರಕ್ಕೆ ಸಿಲುಕಿ ಪಾದಚಾರಿ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲ್ಲೂಕಿನ ಅನ್ನಪೂರ್ಣೇಶ್ವರಿ ಟಾಕೀಸ್ ನ ಬಳಿ ನಡೆದಿದೆ.ಸುದಾಕರ್ ಬಾರ್ ನಿಂದ ಮದ್ಯ ಖರೀದಿ ಮಾಡಿ ಬರುತ್ತಿದ್ದಾಗ ಘಟನೆ ಸಂಭವಿಸಿದೆ.ಪಾದಚಾರಿಯ ಮೃತದೇಹ ಸಂಪೂರ್ಣ ಮುದ್ದೆ ಮಾಂಸವಾಗಿದ್ದರಿಂದಾಗಿ ಮೃತನ ಮಾಹಿತಿ ಇನ್ನು ತಿಳಿದುಬಂದಿಲ್ಲ. ಅಪಘಾತ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆನೇಕಲ್ ಪೋಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.ಈಗಾಗಲೇ ಬಾರ್ ನ ಮಂಭಾಗದಲ್ಲಿ ಹಲವಾರು ಅಪಘಾತಗಳು ನಡೆಯುತ್ತಲೇ ಇವೆ.ಇಷ್ಟೆಲ್ಲ ನಡೆಯುತ್ತಿದ್ದರು ಯಾವುದೇ ಕ್ರಮ ಕೈಗೊಳ್ಳದ ಬಾರ್ ನ ಮಾಲೀಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





