Breaking News

ಸುಪ್ರೀಂ ತೀರ್ಪಿನ ಬಳಿಕ ಶಾಸಕರ ರಾಜೀನಾಮೆ‌ ಬಗ್ಗೆ ಚಿಂತನೆ

ಕೋಲಾರ: ಶಾಸಕರ ರಾಜೀನಾಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವೀಕರಿಸಿರುವ ಸಾರ್ವಜನಿಕ ಅರ್ಜಿಗಳನ್ನ ವಿಚಾರಣೆ ನಡೆಸುವುದಿದೆ.ಸುಪ್ರೀಂ ಕೋರ್ಟ್ ತೀರ್ಪು ಬುಧವಾರ ಬಂದ ನಂತರ ಪ್ರತಿಕ್ರಿಯಿಸುವೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.‌ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನು ಆಧರಿಸಿ ನಾನು ವ್ಯಾಖ್ಯಾನಿಸುವುದಿಲ್ಲ.ಸದನದ ಎಲ್ಲರೂ ನನ್ನನ್ನು ಸ್ಪೀಕರ್ ಮಾಡಿದ್ದಾರೆ. ಸಂವಿಧಾನ ಬದ್ದವಾಗಿ ಕೆಲಸ ಮಾಡುತ್ತೇನೆ ಎಂದರು. ಐಎಂ ಎ ಪ್ರಕರಣದಲ್ಲಿ ಶಾಸಕ ರೋಷನ್ ಬೇಗ್ ಅರೆಸ್ಟ್ ವಿಚಾರ ಕುರಿತು ಪ್ರತಿಕ್ರಿಯಿಸಿ, ಸ್ಪೀಕರ್ ಕಚೇರಿಗೆ ಎಸ್ ಐಟಿ ಮಾಹಿತಿಯನ್ನು ಕೊಟ್ಟಿದೆ.ಎಸ್ ಐಟಿ ಅಧಿಕಾರಿಗಳು ಈ ಬಗ್ಗೆ ತಮ್ಮ ಆಪ್ತ ಕಾರ್ಯದರ್ಶಿಗೆ ಮಾಹಿತಿ ಕೊಟ್ಟಿದ್ದಾರೆ. ಅಪರಾಧ ಪ್ರಕರಣದಲ್ಲಿ ಶಾಸಕರ ಬಂಧನಕ್ಕೆ ಪೂರ್ವಾನುಮತಿ ಬೇಕಾಗಿಲ್ಲ ಎಂದು ತಿಳಿಸಿದರು .

Share News

About admin

Check Also

ಡಿಸಿಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಉಸ್ತುವಾರಿ ನೇಮಕ…

ದೆಹಲಿ : ಸಂಘಟನಾ ಉಸ್ತುವಾರಿಯಾಗಿ ಚಂದ್ ರೆಡ್ಡಿ ಆಯ್ಕೆ… ಶೀಘ್ರವೇ ಕೈ ಅಧ್ಯಕ್ಷರ ಬದಲಾವಣೆ.. ಸಂಘಟನೆ ಚುರುಕುಗೊಳಿಸಿ 2028ರ ಚುನಾವಣೆ …

Leave a Reply

Your email address will not be published. Required fields are marked *