ಕೋಲಾರ: ಮೈತ್ರಿ ಸರ್ಕಾರ ಸೋಮವಾರಕ್ಕೆ ಕೊನೆಯಾಗಲಿದೆ. ಹಾಗೂ ಬಿಜೆಪಿ ವಿಶ್ವಾಸ ಮತ ಯಾಚನೆ ಗೆಲ್ಲುವ ನಂಬಿಕೆಯಿದೆ ಎಂದು ಬಿಜೆಪಿ ಮುಖಂಡ ಕೆಎಸ್.ಈಶ್ವರಪ್ಪ ಹೇಳಿದರು.ಕೋಲಾರದಲ್ಲಿಂದು ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಕುರುಡುಮಲೆಯ ಗಣಪತಿಯ ಆಶೀರ್ವಾದ ಬಿಜೆಪಿ ಮೇಲಿದೆ ಎಂದರು.ಬಳಿಕ ಮಾತನಾಡಿದ ಬಿಜೆಪಿ ಮುಖಂಡ ಸಿಟಿ.ರವಿ ಅವರು, ರಾಜ್ಯದಲ್ಲಿರುವುದು ದೋಸ್ತಿ ಸರ್ಕಾರವಲ್ಲ, ದುಶ್ಮನ್ ಗಳ ಸರ್ಕಾರ. ದೋಸ್ತಿಗಳು ಪರಸ್ಪರ ಮುಗಿಸಲು ಹೊರಟಿರುವುದು ಸ್ಪಷ್ಟ.ಈಗಿನದು ಆಪರೇಷನ್ ಕಮಲವಲ್ಲ, ರಾಜಕೀಯ ದೃವೀಕರಣವಾಗಿದೆ. ಹಿಂದೆ ಹಲವಾರು ಸಲ ನಡೆದಿರುವ ರಾಜಕೀಯ ದೃವೀಕರಣ ಈಗಲೂ ನಡಿತಿದೆ ಎಂದು ಪಕ್ಷವನ್ನು ಸಮರ್ಥಿಸಿಕೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news





