ಮಂಡ್ಯ: ಅಕ್ಕಿಹೆಬ್ಬಾಳು ಗ್ರಾಮದಲ್ಲಿ 5ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜುಲೈ-31ರಂದು ನಡೆಸಲು ನಿರ್ಧರಿಸಲಾಗಿದ್ದು, ಸಮ್ಮೇಳನಾಧ್ಯಕ್ಷರಾಗಿ ಪ್ರಗತಿಪರ ಚಿಂತಕ, ಸಾಂಸ್ಕೃತಿಕ ಸಂಘಟಕ ಜೈನಹಳ್ಳಿ ಸತ್ಯನಾರಾಯಣಗೌಡ ಆಯ್ಕೆಯಾಗಿದ್ದಾರೆ ಎಂದು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ತಿಳಿಸಿದ್ದಾರೆ.
ಈ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಕನ್ನಡದ ನುಡಿ ಹಬ್ಬವನ್ನು ಅರ್ಥಪೂರ್ಣವಾಗಿ ನಡೆಸುವ ಸಂಬಂಧ ಕನ್ನಡದ ಎಲ್ಲಾ ಮನಸುಗಳು ಒಂದಾಗಿ ಕೆಲಸ ಮಾಡಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಪೂರ್ಣಚಂದ್ರ ತೇಜಸ್ವಿ ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ ಸದಸ್ಯ ಬಿ.ಎಲ್.ದೇವರಾಜು, ರಾಮದಾಸು, ತಹಶೀಲ್ದಾರ್ ಎಂ. ಶಿವಮೂರ್ತಿ, ಬಿಇಓ ಎಸ್.ರೇವಣ್ಣ, ಕಸಾಪ ಮಾಜಿ ಅಧ್ಯಕ್ಷರಾದ ಡಾ. ಕೆ.ಕಾಳೇಗೌಡ, ಡಾ.ಎಸ್.ಶ್ರೀನಿವಾಸ ಶೆಟ್ಟಿ, ಕೆ.ಆರ್.ನೀಲಕಂಠ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





