ಮಂಡ್ಯ: ಜಿಲ್ಲೆಯ ಕಸಬಾ ಹೋಬಳಿಯ ಗುಡ್ಡೇನಹಳ್ಳಿ ಗ್ರಾಮದ ಹಿರಿಯ ಮುಖಂಡರಾದ ಅಂದಾನಿಗೌಡ(85) ಅವರು ಇಂದು ನಿಧನ ಹೊಂದಿದ್ದಾರೆ.ಮೃತರು ಪತ್ನಿ ಜಯಮ್ಮ, ಅಗ್ರಹಾರಬಾಚಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸೋಮಣ್ಣ ಸೇರಿದಂತೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯು ಜುಲೈ 26ರಂದು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸ್ವಗ್ರಾಮ ಗುಡ್ಡೇನಹಳ್ಳಿ ಗ್ರಾಮದಲ್ಲಿ ನಡೆದಿದೆಯೆಂದು ಕುಟುಂಬದ ಮೂಲಗಳು ತಿಳಿಸಿವೆ.ಮೃತರ ನಿಧನಕ್ಕೆ ತಾಲೂಕಿನ ವಿವಿಧ ಗಣ್ಯರು ತಮ್ಮ ಸಂತಾಪ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





