Breaking News

ಬಿಜೆಪಿಗೆ ಒಂದು ವಾರದೊಳಗೆ ಬಹುಮತ ಸಾಬೀತಿಗೆ ರಾಜ್ಯಪಾಲ ವಜೂಬಾಯಿ ವಾಲಾ ಸೂಚನೆ

ಬೆಂಗಳೂರು: ಹೊಸ ಸರಕಾರ ರಚನೆಗೆ ಹಕ್ಕು ಮಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಒಂದು ವಾರದೊಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ವಜೂಬಾಯಿ ವಾಲಾ ಸೂಚನೆ ನೀಡಿದ್ದಾರೆ.

2018ರಲ್ಲಿ ಯಡಿಯೂರಪ್ಪ ಸರಕಾರ ರಚನೆಗೆ ಹಕ್ಕು ಮಂಡಿಸಿದ ಸಂದರ್ಭದಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ 15 ದಿನಗಳ ಕಾಲಾವಕಾಶ ನೀಡಿದ್ದರು. ಈ ಬಗ್ಗೆ ಕಾಂಗ್ರೆಸ್-ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದ್ದವು.
ವಿಧಾನಸಭೆಯಲ್ಲಿ ಸದ್ಯದ ಒಟ್ಟು ಸದಸ್ಯ ಬಲ ಸ್ಪೀಕರ್ ಸೇರಿ 222. ಓರ್ವ ಪಕ್ಷೇತರ ಸದಸ್ಯನ ಬೆಂಬಲ ಸೇರಿ ಬಿಜೆಪಿಯ ಬಲ 106. ಬಹುಮತ ಸಾಬೀತಿಗೆ 112 ಸದಸ್ಯರ ಅಗತ್ಯ ಬಿಜೆಪಿಗಿದೆ.

Share News

About admin

Check Also

Featured Video Play Icon

ಗ್ಯಾರಂಟಿ ನೀಡಿರುವ ಕಾಂಗ್ರೆಸ್ಸಿನ ಸರ್ಕಾರಕ್ಕೆ ಗ್ಯಾರಂಟಿಯೇ ಇಲ್ಲ: ಕೇಂದ್ರ ಸಚಿವ ಜೋಶಿ ಕಿಡಿ..

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ‌ ಇಲ್ಲ.ಡಿ.ಕೆ.ಶಿವಕುಮಾರ ಹಾಗೂ ಸಿದ್ಧರಾಮಯ್ಯ ಕಚ್ಚಾಡುತ್ತಿದ್ದಾರೆ. ಹೆಚ್ಚಿನ‌ ಡಿಸಿಎಂಗಳನ್ನು ಮಾಡಿ‌ …

Leave a Reply

Your email address will not be published. Required fields are marked *

You cannot copy content of this page