Breaking News

ಇಂದೇ ಪ್ರಮಾಣವಚನ ಸ್ವೀಕರಿಸಲಿರುವ ಬಿಎಸ್ ವೈ

ಬೆಂಗಳೂರು:ಬಿಎಸ್​​ ಯಡಿಯೂರಪ್ಪ ಇಂದು ನಾಲ್ಕನೇ ಬಾರಿಗೆ ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 6 ಗಂಟೆಗೆ ಪ್ರಮಾಣವಚನಕ್ಕೆ ಸಮಯ ನಿಗದಿಯಾಗಿದೆ. ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಲಿದ್ದಾರೆ.ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಯ ಬಾಲಾಂಜನೇಯ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದ ಬಿಎಸ್​​ ಯಡಿಯೂರಪ್ಪ ಬಳಿಕ ನೇರವಾಗಿ ರಾಜಭವನಕ್ಕೆ ತೆರಳಿದ್ರು. ಪುತ್ರ ರಾಘವೇಂದ್ರ, ಶಾಸಕರಾದ ರಘುಪತಿ ಭಟ್ ಸಹಿತ ಹಲವು ಶಾಸಕರೊಂದಿಗೆ ರಾಜ್ಯಪಾಲರನ್ನ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ರು. ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕಾರಕ್ಕೆ ಬಿಎಸ್​​ವೈ ಬೇಡಿಕೆ ಇಟ್ಟಿದ್ದರು. ಆದ್ರೆ ಅದಕ್ಕೆ ಕೆಲವೇ ಗಂಟೆಗಳಿರುವ ಕಾರಣ ರಾಜ್ಯಪಾಲರು ಸಂಜೆ 6 ಗಂಟೆಗೆ ಪ್ರಮಾಣವಚನಕ್ಕೆ ಸಮಯ ಕೊಟ್ಟಿದ್ದಾರೆ.

Share News

About admin

Check Also

ಸಚಿವರಿಗೆ ಖಾತೆ ಹಂಚಿದ ಸಿಎಂ ಡಿಕೆಶಿ..! ಯಾರಿಗೆ ಯಾವ ಖಾತೆ ಸಿಕ್ಕಿತು..?

ಡಿಕೆಶಿ ಸರ್ಕಾರದಲ್ಲಿ ಖಾತೆ ಫಿಕ್ಸ್..! ಕೆಲವರಿಗೆ ಹಳೆ ಖಾತೆ, ಕೆಲವರಿಗೆ ಹೊಸ ಜವಾಬ್ದಾರಿ..! ಬೆಂಗಳೂರು: ಸಚಿವರಿಗೆ ಖಾತೆ ಹಂಚಿದ ಸಿಎಂ …

Leave a Reply

Your email address will not be published. Required fields are marked *