ಹುಬ್ಬಳ್ಳಿ: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡು ಪತನವಾಗಿದ್ದು, ಬಿ.ಎಸ್.ಯಡಿಯೂರಪ್ಪ ನಾಲ್ಕನೆಯ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ.ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿಲಿರುವ ಯಡಿಯೂರಪ್ಪ ಅವರು ಮಾಜಿ ಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿಯವರಿಗೆ ಪ್ರಮಾಣ ವಚನಕ್ಕೆ ಆಗಮಿಸುವಂತೆ ಬುಲಾವ್ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಕುತೂಹಲ ಸೃಷ್ಟಿಸುತ್ತಿದೆ.ದೂರವಾಣಿ ಮೂಲಕ ಬಸವರಾಜ ಹೊರಟ್ಟಿಯವರನ್ನು ಸಂಪರ್ಕಿಸಿದ ಯಡಿಯೂರಪ್ಪ ಅವರು ಕೂಡಲೇ ತಮ್ಮ ಕುಟುಂಬ ಸಮೇತವಾಗಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದಾರೆ. ಇದೇ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಹೊರಟ್ಟಿಯವರು ಯಡಿಯೂರಪ್ಪ ಅವರಿಗೆ ದೇವರು ಒಳ್ಳೆಯದು ಮಾಡಲಿ ಮುಳ್ಳಿನ ಹಾದಿಯಂತಿದೆ ನಿಮ್ಮ ಅಧಿಕಾರದ ಪ್ರಸ್ತುತ ಸ್ಥಿತಿ ಎಂದು ಸೂಚನೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





