ಚಿತ್ರದುರ್ಗ: ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ ಸ್ಥಾನಕ್ಕೆ ಬಿರುಸಿನ ಪ್ರಚಾರ ಪ್ರಾರಂಭವಾಗಿದೆ.
ಸಂಘದ ಮಾಜಿ ಅಧ್ಯಕ್ಷ ಮಂಜೇಗೌಡ ನೇತೃತ್ವದಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಯುತ್ತಿದೆ .
ಅಧ್ಯಕ್ಷರ ಸ್ಥಾನಕ್ಕೆ ಕೃಷ್ಣಮೂರ್ತಿ ಎಸ್. ಮತ್ತು ಕಾರ್ಯದರ್ಶಿ ಸ್ಥಾನಕ್ಕೆ ಸೋಮಶೇಖರಯ್ಯ ಪರ ಮತ ಕೋರಿ ಪ್ರಚಾರ ಮಾಡಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಸರಕಾರಿ ನೌಕರರ ಸಂಘದ ಚುನಾಯಿತ ಪ್ರತಿನಿಧಿಗಳು ಮತ್ತು ಆರೂ ತಾಲೂಕಿನ ಚುನಾಯಿತ ಪ್ರತಿನಿಧಿಗಳು ಮತ್ತು ಚಿತ್ರದುರ್ಗ ಜಿಲ್ಲೆಯಿಂದ ರಾಜ್ಯ ಪರಿಷತ್ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





