Breaking News

ಕೋಲಾರದಲ್ಲಿ ಬೆಸ್ಕಾಂ ನೌಕರನ ಮೇಲೆ ಹಲ್ಲೆ

ಕೋಲಾರ: ಬೆಸ್ಕಾಂ ನೌಕರನ ಮೇಲೆ ಕಿಡಿಗೇಡಿ ಗ್ರಾಹಕನೋರ್ವ ಹಲ್ಲೆ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಬಾಕಿಯಿದ್ದ ಕರೆಂಟ್ ಬಿಲ್ಪಾವತಿಸುವಂತೆ ಕೇಳಿದ್ದು ಹಲ್ಲೆಗೆ ಕಾರಣವಾಗಿದೆ. ಹಲ್ಲೆಗೊಳಗಾದ ನೌಕರ ಪೊಲೀಸ್ ಠಾಣೆಗೆ ದೂರನ್ನು ಕೊಟ್ಟಿದ್ದಾನೆ.ಕೋಲಾರ ತಾಲೂಕಿನ ನಾಗಲಾಪುರ ಗ್ರಾಮದ ನಾಗರಾಜು ಅವ್ರ ಕೋಳಿಫಾರಂ ಇದೆ. ಈ ಕೋಳಿ ಫಾರಂಗೆ ವಿದ್ಯುತ್ ಸಂಪರ್ಕದ ಬಿಲ್ 5 ಸಾವಿರ ರುಪಾಯಿಗಳಿಗೂ ಹೆಚ್ಚು ಬಾಕಿಯಿದೆ. ಬಾಕಿ ಹಣವನ್ನು ಪಾವತಿಸುವಂತೆ ಬೆಸ್ಕಾಂ ನೌಕರ ನವೀನ್ ಮಾಲೀಕರನ್ನು ಇಂದು ಕೇಳಿದ್ದಾರೆ. ಆದ್ರೆ, ಗ್ರಾಹಕ ನಾಗರಾಜು ಹಣ ಪಾವತಿಸಲು ಒಪ್ಪದೆ ದಬ್ಬಾಳಿಕೆ ನಡೆಸಿದ್ದಾನೆ. ಇದರಿಂದಾಗಿ ಕೋಳಿ ಫಾರಂ ಘಟಕಕ್ಕೆ ಕಲ್ಪಿಸಿದ್ದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾನೆ. ಇದ್ರಿಂದ ರೊಚ್ಚಿಗೆದ್ದ ಗ್ರಾಹಕ ನಾಗರಾಜು ಬೆಸ್ಕಾಂ ನೌಕರ ನವೀನ್ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದವ್ರು ಜಗಳವನ್ನು ನಿಲ್ಲಿಸಿದ್ದಾರೆ. ಹಲ್ಲೆಗೊಳಗಾದ ನವೀನ್ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

Share News

About admin

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *