ಧಾರವಾಡ : ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿನ ಕಾಶೀಳ ಬಳಿ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಬಳಿ ರಸ್ತೆ ಅಪಘಾತದಲ್ಲಿ ಧಾರವಾಡದ ಒಂದೇ ಕುಟುಂಬದ 6 ಜನರು ಮೃತಪಟ್ಟಿದ್ದು, ಇಬ್ವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಸುಕಿನಲ್ಲಿ ನಡೆದಿದೆ.ಅಪಘಾತದಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಎರಡೂವರೆ ವರ್ಷದ ಒಬ್ಬ ಬಾಲಕ ಮತ್ತು 5 ವರ್ಷದ ಬಾಲಕಿ ಮೃತಪಟ್ಟಿದ್ದು, ಇವರು ಧಾರವಾಡದ ನಿಜಾಮೋದಿನ ಸೌದಾಗರ ಎಂಬ ಕುಟುಂಬದವರು ಎನ್ನಲಾಗಿದೆ.ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಸದ್ಯ ಕಾರು ಚಾಲಕ ಮತ್ತು ಒಂದು ಹೆಣ್ಣ ಮಗುವಿಗೆ ಗಂಭೀರ ಗಾಯಗೊಂಡಿದ್ದು,, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಬೋರೆಗಾಂವ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.ಹಾಗೂ ಈ ಸಂಬಂದ ಕಾಶೀಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





