Breaking News

ಹಾವಿಗೆ ಹಾಲೆರೆಯುವ ಬದಲು ಮಕ್ಕಳಿಗೆ ಹಾಲು ನೀಡಲು ಜಯಮೃತ್ಯುಂಜಯ ಶ್ರೀ ಗಳ ಮನವಿ

ದಾವಣಗೆರೆ : ಶ್ರಾವಣ ಮಾಸದಲ್ಲಿ ಬರುವ ನಾಗರ ಪಂಚಮಿಯಲ್ಲಿ ಕಲ್ಲಿನ ನಾಗರಹಾವಿಗೆ ಹಾಲು ಏರಿಯುವ ಬದಲು ಮಕ್ಕಳಿಗೆ ಹಾಲು ನೀಡಿ ಎಂದು ದಾವಣಗೆರೆಯಲ್ಲಿ ಕೂಡಲ ಸಂಗಮದ ಜಯಮೃತ್ಯುಂಜಯ ಶ್ರೀ ಗಳು ಮನವಿ ಮಾಡಿಕೊಂಡರು… ದಾವಣಗೆರೆಯ ಕೊಂಡಜ್ಜಿ ರಸ್ತೆಯಲ್ಲಿರುವ ಬಿಜಿಎಂ ಶಾಲೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ನಡೆದ 22 ವರ್ಷದ ಕಲ್ಲ ನಾಗರಕ್ಕೆ ಹಾಕುವ ಹಾಲು ಮಕ್ಕಳ ಪಾಲು ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು… ದೇಶಾದ್ಯಂತ ಇನ್ನೇರಡು ಮೂರು‌ ದಿನಗಳಲ್ಲಿ ನಾಗರ ಪಂಚಮಿ ಆಚರಣೆ ಮಾಡಲಾಗುತ್ತದೆ.. ಆಗ ಲಕ್ಷಾಂತರ ‌ಲೀಟರ್ ನಷ್ಟು ಹಾಲನ್ನು ನಾಗರ ಮೂರ್ತಿಗಳಿಗೆ ಹುತ್ತಗಳಿಗೆ ಏರೆದು ವೇಸ್ಟ್ ಮಾಡುತ್ತಿದ್ದಾರೆ.. ಅದನ್ನು ಮಕ್ಕಳಿಗೆ ನೀಡಿದ್ರೆ ಸದೃಡವಾದಂತಹ ದೇಶವನ್ನು ಕಟ್ಟಲು ಸಾಧ್ಯವಾಗುತ್ತದೆ… ಹಾಲು‌ಹುತ್ತಕ್ಕೆ ಏರೆಯುವುದರಿಂದ ಹಾವುಗಳು ಸಹ ಸಾವನ್ನಪ್ಪುವ ಘಟನೆಗಳು ನಡೆದಿದೆ, ಅದ್ದರಿಂದ ಕೇವಲ‌ ಪೂಜೆ ಯನ್ನು ಸಲ್ಲಿಸಿ, ಹಾಲನ್ನು ಮಕ್ಕಳಿಗೆ ವಿತರಣೆ ಮಾಡುವುದರ ಮೂಲಕ ಹಬ್ಬವನ್ನು ಆಚರಣೆ ಮಾಡಿ ಎಂದು ಕರೆ ನೀಡಿದ್ರು.. ಶಾಲೆಯ ಮಕ್ಕಳಿಗೆ ಹಾಲು ಹಾಗೂ ಬನ್ ವಿತರಣೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು.. ಹಾಲನ್ನು ವ್ಯಯ ಮಾಡಿ ಹಬ್ಬವನ್ನು ಆಚರಿಸುವ ಬದಲಾಗಿ ಮಕ್ಕಳಿಗೆ ಉಣಬಡಿಸುವ ಮೂಲಕ ಹಬ್ಬ ಆಚರಣೆ ಮಾಡಬೇಕು.. ಅಲ್ಲದೇ ರಾಜ್ಯ ಸರ್ಕಾರ ಇದನ್ನು ಶಿಕ್ಷಣ ಇಲಾಖೆ ವತಿಯಿಂದ ಹಾಲು ಕುಡಿಯುವ ಹಬ್ಬವನ್ನಾಗಿ ಆಚರಣೆ ಮಾಡಬೇಕು.. ಇದರಿಂದ ಎಲ್ಲಾ ಜಾತಿಯ, ಸಮುದಾಯದ ಮಕ್ಕಳು ಹಾಲು ಕುಡಿಯುವುದರಿಂದ ಭಾವೈಕ್ಯತೆ ವೃದ್ದಿಯಾಗುತ್ತದೆ ಎಂದು ತಿಳಿಸಿದರು.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *