ಕೋಲಾರ;ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಒಬ್ಬರೆ ಸೂಕ್ತ. ಸಿದ್ದರಾಮಯ್ಯ ಗಿಂತ ಯೋಗ್ಯ ನಾಯಕ ಪಕ್ಷದಲ್ಲಿ ನಮಗೆ ಸಿಗೋದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪರ ರಮೇಶ್ ಕುಮಾರ್ ಬ್ಯಾಟಿಂಗ್ ಮಾಡಿದರು. ಕೋಲಾರದ ಸುಗಟೂರು ಗ್ರಾಮದಲ್ಲಿಂದುವ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಒಬ್ಬರೇ ಅತ್ಯಂತ ಯೋಗ್ಯ ವ್ಯಕ್ತಿ ಎಂದರು. ವಿರೋಧ ಪಕ್ಷದ ನಾಯಕನಾಗಿ ಆಯ್ಕೆ ಮಾಡುವ ವಿಚಾರವಾಗಿ ಮಾತನಾಡಿ,ಇಂತಹ ಯಾವುದೇ ಚರ್ಚೆಯಾಗಿಲ್ಲ ಎಲ್ಲಾ ಊಹಾಪೋಹ.ನಾನು ಮತ್ತೆ ಕಾಂಗ್ರೆಸ್ ಸದಸ್ಯತ್ವ ಪಡೆದಿರುವೆ, ಪಕ್ಷ ಒಪ್ಪಿಸಿದ ಕೆಲಸ ಮಾಡುವೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





